Select Location
All Locations
State
Region
City / District
Karnataka Politics: ಸಿದ್ದರಾಮಯ್ಯ ಅವ್ರು ಸೈಲೆಂಟ್ ಆಗಿರಬಹುದು, ಎಂದಿಗೂ ಅವರು ಟಗರು: ಜಮೀರ್

Karnataka Politics: ಸಿದ್ದರಾಮಯ್ಯ ಅವ್ರು ಸೈಲೆಂಟ್ ಆಗಿರಬಹುದು, ಎಂದಿಗೂ ಅವರು ಟಗರು: ಜಮೀರ್

ಬೆಂಗಳೂರು (ಏ.22): ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಗರು. ಅವರು ಮೊದಲು ಹೇಗಿದ್ದರೋ ಈಗಲೂ ಹಾಗೆಯೇ ಇದ್ದಾರೆ. ಟಗರು ಎಂದಿಗೂ ಟಗರೇ. ಅವರು ಸೈಲೆಂಟ್‌ ಆಗಿರಬಹುದು, ಅವರು ಮಾತನಾಡಿದರೆ ಬೇರೆ ರೀತಿಯೇ ಸೌಂಡ್ ಆಗುತ್ತದೆ’ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಮೇಲೆ ಕ್ರಮವಾಗುತ್ತಿದ್ದರೂ ಅಸಹಾಯಕರಾಗಿದ್ದಾರೆ ಎಂಬದರ ಕುರಿತು ಪ್ರತಿಕ್ರಿಯೆ ನೀಡಿದರು.

‘ಸಿದ್ದರಾಮಯ್ಯ ಅವರಿಗೆ ಎಲ್ಲರೂ ಆಪ್ತರೇ. ಅವರು ನಮ್ಮ ಮುಖ್ಯಮಂತ್ರಿಗಳು, ಅವರು ಈಗ ಸೈಲೆಂಟ್ ಆಗಿರಬಹುದು. ಆದರೆ ಅವರು ಮಾತನಾಡಿದರೆ ಬೇರೆ ರೀತಿಯೇ ಸೌಂಡ್‌ ಬರುತ್ತದೆ. ಸದ್ಯ ಅವರು ಮಾತನಾಡುವ ಅಗತ್ಯವಿಲ್ಲ’ ಎಂದು ಹೇಳಿದರು. ಪಕ್ಷದಲ್ಲಿ ಮುಸ್ಲಿಮರಿಗೆ ಯಾವುದೇ ತಾರತಮ್ಯ ಆಗಿಲ್ಲ. ಒಬ್ಬರು ನನ್ನ ಪರ ಮಾತನಾಡುತ್ತಾರೆ. ಇನ್ನೊಬ್ಬರು ಮತ್ತೊಬ್ಬರ ಪರ ಮಾತನಾಡುತ್ತಾರೆ. ಅದನ್ನೆಲ್ಲ ಪರಿಗಣಿಸಬೇಕಾಗಿಲ್ಲ ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದರು.


Asianet News 1 hour ago
Home Flash News