Select Location
All Locations
State
Region
City / District
‘ಬೇವಕೂಫ್ ಮತ್ ಬನಾಓ, ಲಂಚದ ರಾಣಿ’! ಬಂಗಾಳದ ರಣಕಣದಲ್ಲಿ ಮೋದಿ, ಶಾ, ದೀದಿ ನಡುವೆ ನಡೆದಿದ್ದ ವಾಕ್ಸಮರದ ಹಿನ್ನೋಟ

‘ಬೇವಕೂಫ್ ಮತ್ ಬನಾಓ, ಲಂಚದ ರಾಣಿ’! ಬಂಗಾಳದ ರಣಕಣದಲ್ಲಿ ಮೋದಿ, ಶಾ, ದೀದಿ ನಡುವೆ ನಡೆದಿದ್ದ ವಾಕ್ಸಮರದ ಹಿನ್ನೋಟ

ನವದೆಹಲಿ, ಮೇ 4: ಇಡೀ ದೇಶದ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳ (West Bengal) ವಿಧಾನಸಭಾ ಚುನಾವಣೆಯ ಮಹಾ ಅಗ್ನಿಪರೀಕ್ಷೆಯ ಫಲಿತಾಂಶದ ಕ್ಷಣಗಳು (Assembly Election Result 2026) ಹತ್ತಿರ ಬಂದಿದ್ದು, ಬಿಜೆಪಿ (BJP) ಅಧಿಕಾರಕ್ಕೇರುವುದು ನಿಚ್ಚಳವಾಗಿದೆ. ಕಳೆದ ಎರಡು ತಿಂಗಳಿಂದ ಗಂಗೆಯ ಮಡಿಲಲ್ಲಿ ನಡೆದಿದ್ದು ಕೇವಲ ಚುನಾವಣೆಯಲ್ಲ, ಅದು ರಕ್ತಸಿಕ್ತ ರಾಜಕೀಯದ ಕುರುಕ್ಷೇತ್ರ. ಮಮತಾ ಬ್ಯಾನರ್ಜಿಯವರ (Mamata Banerjee) 15 ವರ್ಷಗಳ ಭದ್ರಕೋಟೆಯನ್ನು ಭೇದಿಸಲು ಪ್ರಧಾನಿ ಮೋದಿ (Narendra Modi) ಮತ್ತು ಅಮಿತ್ ಶಾ ನಡೆಸಿದ ‘ಚಾಣಕ್ಯ ತಂತ್ರ’ ಹಾಗೂ ಅದಕ್ಕೆ ದೀದಿ ನೀಡಿದ ಪ್ರತಿಪ್ರಹಾರಗಳು ಈ ಬಾರಿಯ ಚುನಾವಣೆಯನ್ನು ಇತಿಹಾಸದ ಪುಟಗಳಲ್ಲಿ ದಾಖಲಾಗುವಂತೆ ಮಾಡಿವೆ.

ಈ ಬಾರಿಯ ಪ್ರಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ‘ಬೇವಕೂಫ್ ಮತ್ ಬನಾಓ (ಮೂರ್ಖರನ್ನಾಗಿ ಮಾಡಬೇಡಿ)’ ಎಂಬ ಖಡಕ್ ಮಾತು ಭಾರಿ ಸದ್ದು ಮಾಡಿತ್ತು. ಟಿಎಂಸಿ ನಾಯಕರ ಹೇಳಿಕೆಗಳಿಗೆ ಪ್ರತಿಯಾಗಿ ಶಾ ಆಡಿದ ಈ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇನ್ನು ಪ್ರಧಾನಿ ಮೋದಿ ಅವರು ನೇರವಾಗಿಯೇ ಮಮತಾ ಬ್ಯಾನರ್ಜಿಯವರನ್ನು ‘ಲಂಚದ ರಾಣಿ’ ಎಂದು ಟೀಕಿಸುವ ಮೂಲಕ ಭ್ರಷ್ಟಾಚಾರ ಮತ್ತು ಕಮಿಷನ್ ದಂಧೆಯ ಆರೋಪಗಳನ್ನು ಜನರ ಮುಂದಿಟ್ಟಿದ್ದರು.

ಬಿಜೆಪಿ ಪ್ರಚಾರದ ಉದ್ದಕ್ಕೂ ಮಹಿಳೆಯರ ಸುರಕ್ಷತೆ ಮತ್ತು ಶಿಕ್ಷಕರ ನೇಮಕಾತಿ ಹಗರಣವನ್ನು ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಂಡಿತು. ‘ದೀದಿ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ’ ಎಂದು ಆರೋಪಿಸಿದ ಅಮಿತ್ ಶಾ, ಬಾಂಗ್ಲಾದೇಶದ ನುಸುಳುಕೋರರಿಗೆ ಟಿಎಂಸಿ ಆಶ್ರಯ ನೀಡುತ್ತಿರುವುದು ದೇಶದ ಭದ್ರತೆಗೆ ಅಪಾಯ ಎಂದು ಎಚ್ಚರಿಸಿದರು. ಅಲ್ಲದೆ, ‘ಬಂಗಾಳದ ಮುಂದಿನ ಸಿಎಂ ಬಂಗಾಳದ ಮಣ್ಣಿನ ಮಗನೇ ಹೊರತು ದೀದಿಯ ಸೋದರ ಸಂಬಂಧಿಯಲ್ಲ’ ಎಂದು ಹೇಳುವ ಮೂಲಕ ಗುಡುಗಿದ್ದರು.


TV9 Kannada 1 hour ago
Home Flash News