Select Location
All Locations
State
Region
City / District
ಭಾರೀ ಮಳೆ, ಭೂಕುಸಿತ ಹಿನ್ನೆಲೆ: ಚಾರ್ ಧಾಮ್ ಯಾತ್ರೆ ಎರಡು ದಿನಗಳ ಕಾಲ ತಾತ್ಕಾಲಿಕ ಸ್ಥಗಿತ

ಭಾರೀ ಮಳೆ, ಭೂಕುಸಿತ ಹಿನ್ನೆಲೆ: ಚಾರ್ ಧಾಮ್ ಯಾತ್ರೆ ಎರಡು ದಿನಗಳ ಕಾಲ ತಾತ್ಕಾಲಿಕ ಸ್ಥಗಿತ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ವಿವಿಧೆಡೆ ಸಂಭವಿಸುತ್ತಿರುವ ಭೂಕುಸಿತದಿಂದಾಗಿ ರಸ್ತೆಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ, ಚಾರ್ ಧಾಮ್ ಯಾತ್ರೆಯನ್ನು ಮಂಗಳವಾರದಿಂದ ಅನ್ವಯವಾಗುವಂತೆ ಮುಂದಿನ ಎರಡು ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾತ್ರಿಕರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳವಾರ ಮತ್ತು ಬುಧವಾರ ಚಾರ್ ಧಾಮ್ ಯಾತ್ರೆಯನ್ನು ತಡೆಹಿಡಿಯಲಾಗಿದೆ ಎಂದು ಗರ್ವಾಲ್ ವಿಭಾಗದ ಕಮಿಷನರ್ ಆನಂದ್ ಸ್ವರೂಪ್ ತಿಳಿಸಿದ್ದಾರೆ. ಹವಾಮಾನ ಇಲಾಖೆಯು ಈ ಪ್ರದೇಶದಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿರುವುದಲ್ಲದೆ, ಯಾತ್ರೆಯ ಪ್ರಮುಖ ಮಾರ್ಗಗಳಲ್ಲಿ ಹಲವೆಡೆ ಭೂಕುಸಿತ ಸಂಭವಿಸಿ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಹೀಗಾಗಿ ಹವಾಮಾನ ಪರಿಸ್ಥಿತಿ ಸುಧಾರಿಸಿ, ರಸ್ತೆಗಳು ಪ್ರಯಾಣಕ್ಕೆ ಸುರಕ್ಷಿತವಾಗಿವೆ ಎಂದು ಖಚಿತಪಟ್ಟ ನಂತರವಷ್ಟೇ ಯಾತ್ರೆಯನ್ನು ಪುನರಾರಂಭಿಸಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಆರೋಗ್ಯ ಪ್ರಯೋಜನ ಪ್ಯಾಕೇಜ್-2022ರಡಿ 27 ವೈದ್ಯಕೀಯ ವಿಭಾಗಗಳಲ್ಲಿ 1,961 ಚಿಕಿತ್ಸಾ ಪ್ಯಾಕೇಜ್‌ಗಳ ಮೂಲಕ ನಗದು ರಹಿತ ಆರೋಗ್ಯ ಸೇವೆಯನ್ನು ಒದಗಿಸಲಾಗುತ್ತಿದೆ ಎಂದೂ ಜಾಧವ್ ತಿಳಿಸಿದರು.


Udayavani 1 month ago
Home Flash News